23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಕೊಯ್ಯೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.ರಿಂದ ಎ.9ರವರೆಗೆ ಜರುಗಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನಾ ಘಟಕಕ್ಕೆ ಸೇರಿಕೊಂಡು ತಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು. ಶಿಸ್ತು, ಸಮಯಪ್ರಜ್ಞೆ, ತಾಳ್ಮೆ ಮುಂತಾದ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು, ಹೆತ್ತವರಿಗೆ ಗೌರವ ಕೊಡಬೇಕು, ಎನ್ಎಸ್ಎಸ್ ನಂತಹ ಘಟಕಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಆದರ್ಶ ವಿದ್ಯಾರ್ಥಿಯಾಗಿ ಬಾಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಜಗನ್ನಾಥ ಮಾತನಾಡಿ ಏಳು ದಿನಗಳ ಕಾಲ ನಡೆದ ಶಿಬಿರವು ನಮ್ಮ ಶಾಲೆಯ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ ಕೆ.ಎನ್ ಸಮಾರೋಪ ಭಾಷಣ ಮಾಡಿ ಎನ್ಎಸ್ಎಸ್ ಶಿಬಿರಾರ್ಥಿ ಗಳ ಕಾರ್ಯವೈಕರಿಯ ಬಗ್ಗೆ ಪ್ರಶಂಸನಿಯ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಗೌರವ ಉಪಸ್ಥಿತರಿದ್ದು ಅಭಿನಂದನಾ ಭಾಷಣವನ್ನು ಮಾಡಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ವನಾಥ ಪೂಜಾರಿ ಮಲೆಬೆಟ್ಟು, ಲೀಲಾ, ಸೇವಾ ಪ್ರತಿನಿಧಿಗಳು ಧರ್ಮಸ್ಥಳ , ಶಾಲೆಯ ತಾಯಂದಿರ ಸಮಿತಿಯ ಅಧ್ಯಕ್ಷೆ ಜಯಂತಿ ಬಾಲಚಂದ್ರ ಗೌಡ ಫೋಸಟ್ಟೂ, ಉಪಸ್ಥಿತರಿದ್ದು ಶುಭ ಹಾರೈಸಿದರು.

ಎನ್ಎಸ್ಎಸ್ ಘಟಕದ ನಾಯಕರಾದ ಆಶಿಕ್, ಭೂಮಿಕಾ ಶೆಟ್ಟಿ, ದೀಕ್ಷಾ, ಮನಘೋಷಿತ್ , ಚಿಂತನ್ , ಶಿಬಿರದ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಿಬಿರದ ನೆನಪಿಗಾಗಿ ಶಾಲೆಗೆ ಕಂಚಿನ ಗಂಟೆಯನ್ನು ನೀಡಲಾಯಿತು. ಶಿಬಿರಾಧಿಕಾರಿ ಬಿ ಎ ಶಮೀವುಲ್ಲ ಪ್ರಾಸ್ತಾವಿಸಿ, ಸ್ವಾಗತಿಸಿದರು, ಸಹ ಶಿಬಿರ ಅಧಿಕಾರಿ ಅಂಬಿಕಾ ಶಿಬಿರದ ಸಂಪೂರ್ಣ ವರದಿಯನ್ನು ಮಂಡಿಸಿದರು, ಶಿಬಿರಾರ್ಥಿಗಳಾದ ದೀಕ್ಷಿತ್ ಮತ್ತು ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರ ಅಧಿಕಾರಿ ಸತೀಶ್ ಸಾಲಿಯಾನ್ ಧನ್ಯವಾದಗೈದರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!