23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

ಉಜಿರೆ: “ಸಿನಿಮಾ ಹಾಗೂ ಡಿಜಿಟಲ್ ಕ್ಷೇತ್ರ ಎಲ್ಲರಿಗೂ ಒಂದು ಕ್ರಿಯೇಟಿವ್ ಸ್ವಾತಂತ್ರ್ಯ ನೀಡುತ್ತದೆ. ಆದರೆ ಆ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಗಳೂ ಇರುತ್ತವೆ. ಸಿಕ್ಕ ಸ್ವಾತಂತ್ರ್ಯವನ್ನು ಸಮಾಜಕ್ಕೆ ಪೂರಕವಾಗಿ ಬಳಸಬೇಕಾಗಿರುವುದೇ ನಮ್ಮ ಜವಾಬ್ದಾರಿ ಆಗಿದೆ” ಎಂದು ಎಸ್ಡಿಎಂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಸ್ ಹೇಳಿದರು.

ಎಸ್ಡಿಎಂ ಕಾಲೇಜಿನ ಬಿ. ವೋಕ್. ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ಹಾಗೂ ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, “ಸಿನಿಮಾ ಕ್ಷೇತ್ರ ಇಂದು ವ್ಯಾಪಾರೀಕರಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಆದರೆ ನಾವು ಜವಾಬ್ದಾರಿಯುತ ಕ್ರಿಯೇಟರ್‌ಗಳಾಗಿ ಸಮಾಜಕ್ಕೆ ಉಪಯೋಗ ಆಗುವಂತಹ ಕಂಟೆಂಟ್ ಕೊಡುವವರಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅಂಕಿತಾ ಹಾಗೂ ವಿದ್ಯಾರ್ಥಿ ಅಚ್ಯುತ್, ಕ್ರಮವಾಗಿ ಲೂಮೋಸ್ ಸಂಘ ಹಾಗೂ ಟೆಸರಾಕ್ಟ್ ಸೊಸೈಟಿಯ ವಾರ್ಷಿಕ ವರದಿಯನ್ನು ವಾಚಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಜೈನ್, ಇಂದುಧರ್ ಕಿಣಿ ಹಾಗೂ ತೇಜಸ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!