22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿದ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಕಾಂಪೌಂಡ್ ತೆರವು ಮಾಡಲಾಗಿದೆ.

ಬೆಳ್ತಂಗಡಿ ನಗರದ ಜೈನ್ ಪೇಟೆಯ ರಾಜೇಶ್ ನಲಿಕೆ ಮತ್ತು ಶಾಜೀದಾ ನಡುವೆ ಜಾಗದ ತಕರಾರು ಪ್ರಕರಣದ ಸಂಬಂಧ ಸ.ನಂ.206/5B ರಲ್ಲಿ ಸರಕಾರಿ ಜಾಗದಲ್ಲಿ ರಾಜೇಶ್ ನಲಿಕೆ ಎಂಬವರು ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿರುವ ದೂರಿನ ಮೇರೆಗೆ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ಪೊಲೀಸರು ಏ.10 ರಂದು ಕಾನೂನು ರೀತಿಯಲ್ಲಿ ತೆರವು ಮಾಡಿ ಸರಕಾರದ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ಕಂದಾಯ ನಿರೀಕ್ಷಕ ರಾಜು ಲಮಾಣಿ, ಗ್ರಾಮ ಆಡಳಿತಾಧಿಕಾರಿ ನಾರಾಯಣ ಕುಲಾಲ್ , ಗ್ರಾಮ ಸಹಾಯಕ ಸತೀಶ್, ಸರ್ವೆ ಇಲಾಖೆ ಮಲ್ಲು ಹಾಗೂ ಬೆಳ್ತಂಗಡಿ ಪೊಲೀಸರು ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
error: Content is protected !!