September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏ.16ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದೆ.

ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಿ ಮಾರ್ಚ್ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯು ಶುಕ್ರವಾರ ನ್ಯಾ. ಸಚಿನ್ ಶಂಕ‌ರ್ ಮಗದು. ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರ ಪರ ವಕೀಲರು, “ಅರ್ಜಿ ವಿಚಾರಣೆಯನ್ನು ಏ.24 ಅಥವಾ 27ಕ್ಕೆ ಮುಂದೂಡಬೇಕು. ಅಲ್ಲಿಯವರೆಗೆ ಗಡಿಪಾರು ಆದೇಶ ಜಾರಿಗೆ ತಾತ್ಕಾಲಿಕ ತಡೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶವನ್ನು ಮುಂದುವರಿಸಬೇಕು,” ಎಂದು ಕೋರಿದರು.

ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ. ಅರ್ಜಿದಾರರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಲಾಗಿದೆ. ಪ್ರಕರಣ ಸಂಬಂಧ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಕಂಡುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ. ಅರ್ಜಿದಾರರು ರೌಡಿಶೀಟರ್ ಆಗಿದ್ದು, ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಗಡೀಪಾರು ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಮಾಡಿದೆ,” ಎಂದು ತಿಳಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya
error: Content is protected !!