23.6 C
ಪುತ್ತೂರು, ಬೆಳ್ತಂಗಡಿ
June 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

ಬೆಳ್ತಂಗಡಿ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

Related posts

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya
error: Content is protected !!