September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

    Suddi Udaya

    ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

    Suddi Udaya

    ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

    Suddi Udaya

    ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

    Suddi Udaya

    ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

    Suddi Udaya

    ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

    Suddi Udaya
    error: Content is protected !!