ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಧರ್ಮಸ್ಥಳ ಪೊಲೀಸರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಆಗಮಿಸಿ ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ವಿಚಾರಿಸಿದಾಗ ತಾನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಎಂಬುವುದಾಗಿ ತಿಳಿಸಿದ್ದು. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳದ ನೇತ್ರಾವತಿ ಬಳಿಗೆ ಆಗಮಿಸಿ ಪೆಟ್ರೋಲ್ ತಾನೆ ತಂದು ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ.

ಈ ಘಟನಾ ವಿಚಾರವನ್ನು ನರೇಂದ್ರ ಮನೆಯವರು ಮಾಹಿತಿ ನೀಡಿದ್ದು ಅವರು ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಾಗಿದೆ.

Related posts

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!