ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೃತಿರವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಹಾಗೂ ಆರತಿ ದಂಪತಿಯ ಪುತ್ರಿ. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.












