September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏ.16ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದೆ.

ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಿ ಮಾರ್ಚ್ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯು ಶುಕ್ರವಾರ ನ್ಯಾ. ಸಚಿನ್ ಶಂಕ‌ರ್ ಮಗದು. ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರ ಪರ ವಕೀಲರು, “ಅರ್ಜಿ ವಿಚಾರಣೆಯನ್ನು ಏ.24 ಅಥವಾ 27ಕ್ಕೆ ಮುಂದೂಡಬೇಕು. ಅಲ್ಲಿಯವರೆಗೆ ಗಡಿಪಾರು ಆದೇಶ ಜಾರಿಗೆ ತಾತ್ಕಾಲಿಕ ತಡೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶವನ್ನು ಮುಂದುವರಿಸಬೇಕು,” ಎಂದು ಕೋರಿದರು.

ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ. ಅರ್ಜಿದಾರರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಲಾಗಿದೆ. ಪ್ರಕರಣ ಸಂಬಂಧ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಕಂಡುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ. ಅರ್ಜಿದಾರರು ರೌಡಿಶೀಟರ್ ಆಗಿದ್ದು, ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಗಡೀಪಾರು ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಮಾಡಿದೆ,” ಎಂದು ತಿಳಿಸಿದರು.

Related posts

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!