26.9 C
ಪುತ್ತೂರು, ಬೆಳ್ತಂಗಡಿ
April 23, 2026
Uncategorized

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

ಬೆಳ್ತಂಗಡಿ : ಪ್ರಣಿತ್ ರಾಜ್ ಫಿಲಂಸ್ ಬೆಳ್ತಂಗಡಿ ಚಿತ್ರಿಕರಿಸಿರುವ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ ರವರು ಬಿಡುಗಡೆಗೊಳಿಸಿ ಮಾತನಾಡುತ್ತಾ ಪ್ರತಿಯೊಬ್ಬ ಚಾಲಕನು ವಾಹನವನ್ನು ಚಲಾಯಿಸುವಾಗ ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಿದಲ್ಲಿ ಅಪಘಾತಗಳನ್ನು ತಪ್ಪಿಸಬಹುದು ಮದ್ಯಪಾನ ಮಾಡಿ ವಾಹನ ಚಲಾಯಿಸ ಬಾರದು, ಹೆಲ್ಮೆಟ್ ಧರಿಸಬೇಕು, ಸೀಟ್ ಬೆಲ್ಟ್ ಹಾಕಿ ವಾಹನ ಚಲಾಯಿಸಬೇಕು ಎನ್ನುತ್ತಾ ಪ್ರಣಿತ್ ರಾಜ್ ಫಿಲಂಸ್ ತಂಡದವರು ರಸ್ತೆ ಸುರಕ್ಷತೆ ಬಗ್ಗೆ ಒಂದು ಒಳ್ಳೆಯ ರಿಲ್ಸ್ ಚಿತ್ರೀಕರಣವನ್ನು ಮಾಡಿರುತ್ತಾರೆ ಈ ರೀಲ್ಸ್ ಎಲ್ಲರಿಗೂ ಅರಿವು ಮೂಡಿಸುವಂತಾಗಲಿ, ಮುಂದೆಯೂ ಇವರಿಂದ ಒಳ್ಳೆಯ ರಿಲ್ಸ್ ಗಳು ಕಿರು ಚಿತ್ರಗಳು ಮೂಡಿಬರಲಿ ಎಂದು ಶುಭ ಹಾರೈಸಿದರು.


ಕಲಾವಿದ ಬಿ.ಹೆಚ್ ರಾಜು ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಬಿಸಿಲು ಮಳೆ ಲೆಕ್ಕಿಸದೆ ರಾತ್ರಿ ಹಗಲು ಎನ್ನದೆ ಸಮಯವನ್ನು ಲೆಕ್ಕಿಸದೆ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರ ಸೇವೆಯನ್ನು ಶ್ಲಾಘೀಸುತ್ತ ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ ಜನರಲ್ಲಿ ಅರಿವು ಮೂಡಿಸುವಂತಹ ರೀಲ್ಸ್ ಮಾಡಲಾಗಿದೆ ಇದರಿಂದ ಸಮಾಜಕ್ಕೆ ಉಪಯುಕ್ತವಾಗಲಿ ಎನ್ನುತ್ತಾ ಸಹಕರಿಸಿದ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ರಾದ ಕಿಶೋರ್ ಗೌಡ ಹಾಗೂ ಸಿಬ್ಬಂದಿಗಳು, ಚಲನಚಿತ್ರ ನಿರ್ದೇಶಕರಾದ ಕೃಷ್ಣ ಬೆಳ್ತಂಗಡಿ, ಕಲಾವಿದ ಶಿವಪ್ಪ ಬಿರುವ, ಬೆಳ್ತಂಗಡಿ ಗೌತಮ್ ಬೆಳ್ತಂಗಡಿ ರವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಣಿತ್ ರಾಜ್ ಫಿಲಂಸ್ ನ ಮುಖ್ಯಸ್ಥ ಪ್ರಣಿತ್ ರಾಜ್, ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ರೀಲ್ಸನ್ನು ಇನ್‌ಸ್ಟಾಗ್ರಾಮ್ ಪ್ರಣಿತ್ ರಾಜ್ ಫಿಲಂಸ್ ಪೇಜ್ ನಲ್ಲಿ ವೀಕ್ಷಿಸಬಹುದು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya
error: Content is protected !!