July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

ಬೆಳ್ತಂಗಡಿ. ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಗಮನ ಸೆಳೆದರು. ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಸಮಸ್ಯೆ ಬಗ್ಗೆ ಚರ್ಚಿಸಿ ಪ್ರಸ್ತುತ ತಾಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು. ಮುಂದಿನ ದಿನಗಳಲ್ಲಿ ಮೂರು ದಿನ ತಾಲೂಕಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ. ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ ಹಾಗೂ ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಸುದರ್ಶನ್ ಮಂಜೀಲ ಆರಂಬೋಡಿ ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya
error: Content is protected !!