September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ರೋಟರಿ ಕ್ಲಬ್ ಲೊರೆಟೋ ಹಿಲ್ಸ್‌ನಿಂದ ಹಿರಿಯ ನಾಗರಿಕರಿಗೆ ಗೌರವ ಸನ್ಮಾನ

    Suddi Udaya

    ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

    Suddi Udaya

    ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

    Suddi Udaya

    ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

    Suddi Udaya

    ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

    Suddi Udaya

    ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

    Suddi Udaya
    error: Content is protected !!