July 25, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025–26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಏ.15 ಮತ್ತು 16ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಅವರು ಎ.13ರಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪುರುಷರಿಗಾಗಿ ‘ಶ್ರೀ ಎಂ.ಕೆ. ಅನಂತರಾಜ್ ಸ್ಮರಣಾರ್ಥ ಟ್ರೋಫಿ’ ಹಾಗೂ ಮಹಿಳೆಯರಿಗಾಗಿ ‘ಫ್ಯಾಬಿಯನ್ ಬಿ.ಎನ್. ಕುಲಾಸೊ ಸ್ಮರಣಾರ್ಥ ರೋಲಿಂಗ್ ಟ್ರೋಫಿ’ಯನ್ನು ಒಳಗೊಂಡ ಈ ಪಂದ್ಯಾಟಕ್ಕೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಸಾಂಘಿಕ ಚಟುವಟಿಕೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವುದು ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ.

ಉದ್ಘಾಟನಾ ಸಮಾರಂಭ: ಏ.15ರಂದು ಪಂದ್ಯಾಟದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ| ಸ್ಟ್ಯಾನಿ ಗೋವಿಯಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ಕರುಣಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ಸಮಾರೋಪ ಸಮಾರಂಭ: ಏ.16ರಂದು ಸಮಾರೋಪ ಸಮಾರಂಭವು ವಂ| ಡಾ| ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಜೋಸೆಫ್ ಎನ್.ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

1982ರಲ್ಲಿ ಸ್ಥಾಪನೆಯಾದ ಸೇಕ್ರೆಡ್ ಹಾರ್ಟ್ ಕಾಲೇಜು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇತ್ತೀಚೆಗೆ ನಡೆದ 2024–25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದ ಸಮಗ್ರ ಚಾಂಪಿಯನ್‌ಶಿಪ್‌ನಲ್ಲಿ ಈ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಪಂದ್ಯಾಟವು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಅವರ ನೇತೃತ್ವದಲ್ಲಿ, ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮದ ಸಂಚಾಲಕ ಡಾ| ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಈಶ್ವರ ಗೌಡ ಪಿ. ಅವರ ಮಾರ್ಗದರ್ಶನದಲ್ಲಿ ಆಯೋಜಿಸಲ್ಪಟ್ಟಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮ ಸಂಚಾಲಕ ಡಾ. ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಈಶ್ವರ ಗೌಡ ಪಿ., ಕನ್ನಡ ಉಪನ್ಯಾಸಕಿ ರಾಜೇಶ್ವರಿ ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!