24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

ಕಡಿರುದ್ಯಾವರ: ಉತ್ಸಾಹಿ ಗೆಳೆಯರ ಬಳಗ ಹೇಡ್ಯ ಕಡಿರುದ್ಯಾವರ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ 2026 ಹಾಗೂ ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟಿಂಗ್ ಉದ್ಘಾಟನಾ ಕಾರ್ಯಕ್ರಮವು ಏ.11ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ರವರು ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟ್ ಉದ್ಘಾಟನೆಯನ್ನು ನೆರವೇರಿಸಿದರು.ರತ್ನಾಕರ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಮಠ ಇದರ ಆಡಳಿತ ಮೊಕ್ತೇಸರರಾದ ಕಿಶೋರ್ ಕುಮಾರ್ ವಳಂಬ್ರ, ಕಡಿರುದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ಬಾಲಚಂದ್ರ ನಾಯಕ್ ಹೇಡ್ಯ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಜನಾರ್ಧನ ಗೌಡ ಉದ್ಧಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಮಾಜಿ ಸದಸ್ಯ ರಾಜೇಶ್ ಕೆ., ಕಡಿರುಡ್ಯಾವರ ವನದುರ್ಗ ದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಬೇಬಿ, ಅಂಗನವಾಡಿ ಕಾರ್ಯಕರ್ತೆ ಭಾರತಿ, ವಸಂತ ಗೌಡ, ಗಂಗಯ್ಯ ಗೌಡ ಉಪಸ್ಥಿತರಿದ್ದರು.

ಆನಂದ ಗೌಡ ಸ್ವಾಗತಿಸಿದರು. ಜನಾರ್ದನ ಕಾನರ್ಪ, ನಾರಾಯಣ ಪೂಜಾರಿ ನಿರೂಪಿಸಿದರು. ಬಾಲಚಂದ್ರ ನಾಯಕ್ ವಂದಿಸಿದರು.

ಫಲಿತಾಂಶ:
-ಪ್ರಥಮ ಬಹುಮಾನ ತ್ರಿಶೂಲ್ ಎಲೆಕ್ಟ್ರಾನಿಕ್ಸ್ ಮಾಲಕತ್ವದ ತ್ರಿಶೂಲ್ ಫ್ರೆಂಡ್ಸ್ ಹೇಡ್ಯ
-ದ್ವಿತೀಯ ಬಹುಮಾನ ಕಾಂಜಲ್ ಫ್ರೆಂಡ್ಸ್ ಕಾಂಜಲ್
-ತೃತೀಯ ಬಹುಮಾನ ತತ್ವಮಸಿ ಮಾಚಾರು ಎ
-ಚತುರ್ಥ ಬಹುಮಾನ ತತ್ವಮಸಿ ಮಾಚಾರು ಬಿ
-ಬೆಸ್ಟ್ ಅಟಾಕರ್ ತ್ರಿಶೂಲ್ ಪ್ರೆಂಡ್ಸ್ ತಂಡದ ಆಟಗಾರರಾದ ಚರಣ್ ಗೌಡ
-ಬೆಸ್ಟ್ ಪಾಸಾರ್ ಆಗಿ ತ್ರಿಶೂಲ್ ಫ್ರೆಂಡ್ಸ್ ತಂಡದ ಆಟಗಾರರಾದ ರಮಾನಂದ ರಂಜು
-ಆಲ್ ರೌಂಡರಾಗಿ ಕಾಂಜಲ್ ಫ್ರೆಂಡ್ಸ್ ಕಾಂಜಲ್ ತಂಡದ ಆಟಗಾರರಾದ ಜಿಯೋ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya
error: Content is protected !!