July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!