July 23, 2026
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

ಬೆಳ್ತಂಗಡಿ: ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪ್ರತಿಭೆ ಇದೆ. ಅದನ್ನು ಯಾವ ರೀತಿಯಾಗಿ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಆತನ ಜೀವನ ಶೈಲಿ ನಿಂತಿರುತ್ತದೆ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಆಧುನಿಕ ಜಗತ್ತಿನಲ್ಲಿ ಯಾವುದೇ ಪ್ರತಿಫಲದ ಜೊತೆಗೆ ಸಂಭಾವನೆಯನ್ನು ಬಯಸದೆ ಸದಾ ಜನಸೇವೆಯ ಮೂಲಕ ಪ್ರತಿ ಮನೆಯಲ್ಲಿಯೂ ಮನೆಮಾತಾಗಿರುವ ಸ್ನೇಕ್ ಅಶೋಕ್ ಇವರ ಈ ಅದ್ಭುತ ಕಾರ್ಯಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ವತಿಯಿಂದ ಕೊಡಲ್ಪಟ್ಟ ರಕ್ಷಣಾ ಕವಚಗಳನ್ನು ಒಳಗೊಂಡ ಕಿಟ್ ನ್ನು ಅವರು ವಿತರಿಸಿದರು.

‘ಉರಗ ಮಿತ್ರ’ ಸನ್ಮಾನವನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ನ್ಯಾಯವಾದಿ ಧನಂಜಯ್ ರಾವ್, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೀಡಿ ಗೌರವಿಸಿದರು.

ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಅರುಣ್ ಕುಕ್ಕಾವು, ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಸಚಿನ್ ವರ್ಧನ್ ದಿನೇಶ್ ಕೋಟ್ಯಾನ್, ವಿನಯ್ ಗುರಿಪಲ್ಲ ವಿನೋದ್ ಶೆಣೈ, ಸುರೇಶ್ ಕುಲಾಲ್, ಸುರೇಂದ್ರ ಕೋಟ್ಯಾನ್, ಅನಿಲ್ ಉಜಿರೆಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya
error: Content is protected !!