22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್ ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶೌರ್ಯ ವಿಪತ್ತು ವಿಭಾಗ, ಪತ್ರಕರ್ತರ ಸಂಘ ಬೆಳ್ತಂಗಡಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಳ್ಳಿಯಿಂದ ನಗರದವರೆಗೆ ನಮ್ಮ ಸ್ವಚ್ಛತೆ ನಮ್ಮ ಜವಾಬ್ದಾರಿ ಪರಿಕಲ್ಪನೆಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನವು ಎ.12ರಂದು ಸವಣಾಲುವಿನಿಂದ ಚರ್ಚ್ ರಸ್ತೆವರೆಗೆ ನಡೆಯಿತು.

ಮಂಜದಬೆಟ್ಟು ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹೋಲಿ ರೆಡೀಮರ್ ಚರ್ಚ್ ನ ಧರ್ಮಗುರು ರೆ.ಫಾ. ವಾಲ್ಟರ್ ಓಸ್ವಾಲ್ಡ್ ಡಿಮೆಲ್ಲೊ ಮಾತನಾಡಿದ ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯವಂತರಾಗಿ ಬದುಕಲು ಸಾಧ್ಯ ಸ್ವಚ್ಛತೆಯಿಂದ ಪರಿಸರ ರಕ್ಷಣೆ ಸಾಧ್ಯ ಅದ್ಧರಿಂದ ಪ್ರಜ್ಞಾವಂತ ನಾಗರೀಕರಾದ ನಾವೆಲ್ಲರೂ ನಮ್ಮ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪಣತೊಡಬೇಕು ಎಂದರು.

ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಸಮಾಜದ ಜವಾಬ್ದಾರಿಯುತ ನಾಗರಿಕರಾದ ನಾವು ಕಸವನ್ನು ಎಲ್ಲೆಂದರಲ್ಲಿ ಬಿಸಾಡಿ ಪರಿಸರವನ್ಬು ಹಾಳುಗೆಡಹುವುತ್ತಿರುವ ಕೆಲಸ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ.ಸ್ವಚ್ಛ ಪರಿಸರವನ್ನು ಉಳಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಇಂತಹ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಚ್ಛ ಪರಿಸರ,ಸ್ವಾಸ್ಥ್ಯ ಸಮಾಜದ ನಿರ್ಮಾಣ ಎಂಬ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿರುವ ಹೋಲಿ ರೆಡೀಮರ್ ಚರ್ಚ್ ನ ಕಾರ್ಯ ಶ್ಲಾಘನೀಯ ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಕೂಡ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದೆ ಎಂದರು.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ತ್ಯಾಜ್ಯ, ಕಸ ಬಿಸಾಡುವುದು ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ ಅಂತವರ ಮೇಲೆ ದಂಡನೆ ಹಾಗೂ ಕೇಸ್ ದಾಖಲಾಗುತ್ತದೆ. ಅದ್ದರಿಂದ ಕಸವನ್ನು ಎಲ್ಲರೂ ನಿರ್ಧಿಷ್ಟ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಅಥವಾ ಪಂಚಾಯತ್ ವಾಹನಕ್ಕೆ ನೀಡಬೇಕು, ಯಾರಾದರೂ ಕಸ ಬಿಸಾಕುವವರು ಕಂಡು ಬಂದರೆ ಪಂಚಾಯತ್ ಗಮನಕ್ಕೆ ತರಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಯಶೋಧರ್ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೀಜನೆ ರಾಜ್ಯಾದ್ಯಂತ ಹಲವಾರು ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಈ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಮಾಜಕ್ಕೊಂದು ಸಂದೇಶ ನೀಡುವ ಕೆಲಸ ಮಾಡಿದ್ದಾರೆ ಎಂದರು.

ಈ ವೇಳೆ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೊ, ಸಂಯೋಜಕ ಥೋಮಸ್ ಪಿಂಟೊ, ಲಾಯಿಲ ಗ್ರಾ.ಪಂ ಮಾಜಿ ಅಧ್ಯಕ್ಷೆ ಆಶಾ ಸಲ್ಡಾನ, ಮೇಲಂತಬೆಟ್ಟು ಮಾಜಿ ಸದಸ್ಯ ಚಂದ್ರರಾಜ್ ನೂಜೆಲು, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ವಿನ್ಸೆಂಟ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಸ್ವಚ್ಚತಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡ, ಸ್ಥಳೀಯರು ಭಾಗವಹಿಸಿದರು. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಹಕಾರ ನೀಡಿದರು.

Related posts

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!