24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

ಕಡಿರುದ್ಯಾವರ: ಉತ್ಸಾಹಿ ಗೆಳೆಯರ ಬಳಗ ಹೇಡ್ಯ ಕಡಿರುದ್ಯಾವರ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ 2026 ಹಾಗೂ ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟಿಂಗ್ ಉದ್ಘಾಟನಾ ಕಾರ್ಯಕ್ರಮವು ಏ.11ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ರವರು ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟ್ ಉದ್ಘಾಟನೆಯನ್ನು ನೆರವೇರಿಸಿದರು.ರತ್ನಾಕರ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಮಠ ಇದರ ಆಡಳಿತ ಮೊಕ್ತೇಸರರಾದ ಕಿಶೋರ್ ಕುಮಾರ್ ವಳಂಬ್ರ, ಕಡಿರುದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ಬಾಲಚಂದ್ರ ನಾಯಕ್ ಹೇಡ್ಯ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಜನಾರ್ಧನ ಗೌಡ ಉದ್ಧಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಮಾಜಿ ಸದಸ್ಯ ರಾಜೇಶ್ ಕೆ., ಕಡಿರುಡ್ಯಾವರ ವನದುರ್ಗ ದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಬೇಬಿ, ಅಂಗನವಾಡಿ ಕಾರ್ಯಕರ್ತೆ ಭಾರತಿ, ವಸಂತ ಗೌಡ, ಗಂಗಯ್ಯ ಗೌಡ ಉಪಸ್ಥಿತರಿದ್ದರು.

ಆನಂದ ಗೌಡ ಸ್ವಾಗತಿಸಿದರು. ಜನಾರ್ದನ ಕಾನರ್ಪ, ನಾರಾಯಣ ಪೂಜಾರಿ ನಿರೂಪಿಸಿದರು. ಬಾಲಚಂದ್ರ ನಾಯಕ್ ವಂದಿಸಿದರು.

ಫಲಿತಾಂಶ:
-ಪ್ರಥಮ ಬಹುಮಾನ ತ್ರಿಶೂಲ್ ಎಲೆಕ್ಟ್ರಾನಿಕ್ಸ್ ಮಾಲಕತ್ವದ ತ್ರಿಶೂಲ್ ಫ್ರೆಂಡ್ಸ್ ಹೇಡ್ಯ
-ದ್ವಿತೀಯ ಬಹುಮಾನ ಕಾಂಜಲ್ ಫ್ರೆಂಡ್ಸ್ ಕಾಂಜಲ್
-ತೃತೀಯ ಬಹುಮಾನ ತತ್ವಮಸಿ ಮಾಚಾರು ಎ
-ಚತುರ್ಥ ಬಹುಮಾನ ತತ್ವಮಸಿ ಮಾಚಾರು ಬಿ
-ಬೆಸ್ಟ್ ಅಟಾಕರ್ ತ್ರಿಶೂಲ್ ಪ್ರೆಂಡ್ಸ್ ತಂಡದ ಆಟಗಾರರಾದ ಚರಣ್ ಗೌಡ
-ಬೆಸ್ಟ್ ಪಾಸಾರ್ ಆಗಿ ತ್ರಿಶೂಲ್ ಫ್ರೆಂಡ್ಸ್ ತಂಡದ ಆಟಗಾರರಾದ ರಮಾನಂದ ರಂಜು
-ಆಲ್ ರೌಂಡರಾಗಿ ಕಾಂಜಲ್ ಫ್ರೆಂಡ್ಸ್ ಕಾಂಜಲ್ ತಂಡದ ಆಟಗಾರರಾದ ಜಿಯೋ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!