23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
error: Content is protected !!