September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!