23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!