26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

ಬೆಳ್ತಂಗಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮವು ಕುದ್ಯಾಡಿಯ ಮುದ್ರಾಜೆ ದುರ್ಗಾಂಬ ಸದನದಲ್ಲಿ ಕುಟುಂಬಸ್ಥರು, ಬಂಧು-ಮಿತ್ರರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಡಗರದಿಂದ ಆಚರಿಸಲಾಯಿತು.

ಈ ವಿಶೇಷ ಸಂದರ್ಭದಲ್ಲಿ ದಂಪತಿಗಳ ಐವತ್ತು ವರ್ಷದ ವೈವಾಹಿಕ ಜೀವನದ ಸ್ಮರಣೀಯ ಕ್ಷಣಗಳನ್ನು ಸ್ಮರಿಸಿ, ಅವರ ಸೌಹಾರ್ದಯುತ ಜೀವನ, ಪರಸ್ಪರ ಪ್ರೀತಿ, ಸಹಕಾರ ಮತ್ತು ಕುಟುಂಬದ ಮೇಲಿನ ನಿಷ್ಠೆ ಎಲ್ಲರಿಗೂ ಪ್ರೇರಣೆಯಾಯಿತು. ಕಾರ್ಯಕ್ರಮದಲ್ಲಿ ಕುಟುಂಬದವರು ಮತ್ತು ಆತ್ಮೀಯರು ದಂಪತಿಗಳಿಗೆ ಹಾರೈಸಿ, ಅವರ ಮುಂದಿನ ಜೀವನವು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ ಎಂದು ಶುಭಕೋರಿದರು.

ಸಮಾರಂಭವು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭವಾಗಿ ಮನೋರಂಜನೆ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಮೆರಗು ಪಡೆಯಿತು. ಉಪಸ್ಥಿತರಿದ್ದ ಎಲ್ಲರೂ ಈ ಸುವರ್ಣ ಸಂಭ್ರಮವನ್ನು ಸಂತೋಷಭರಿತವಾಗಿ ಅನುಭವಿಸಿ, ದಂಪತಿಗಳ ಜೀವನ ಸಾಧನೆಯನ್ನು ಕೊಂಡಾಡಿದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya
error: Content is protected !!