September 6, 2026
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

ಬೆಳ್ತಂಗಡಿ: ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪ್ರತಿಭೆ ಇದೆ. ಅದನ್ನು ಯಾವ ರೀತಿಯಾಗಿ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಆತನ ಜೀವನ ಶೈಲಿ ನಿಂತಿರುತ್ತದೆ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಆಧುನಿಕ ಜಗತ್ತಿನಲ್ಲಿ ಯಾವುದೇ ಪ್ರತಿಫಲದ ಜೊತೆಗೆ ಸಂಭಾವನೆಯನ್ನು ಬಯಸದೆ ಸದಾ ಜನಸೇವೆಯ ಮೂಲಕ ಪ್ರತಿ ಮನೆಯಲ್ಲಿಯೂ ಮನೆಮಾತಾಗಿರುವ ಸ್ನೇಕ್ ಅಶೋಕ್ ಇವರ ಈ ಅದ್ಭುತ ಕಾರ್ಯಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ವತಿಯಿಂದ ಕೊಡಲ್ಪಟ್ಟ ರಕ್ಷಣಾ ಕವಚಗಳನ್ನು ಒಳಗೊಂಡ ಕಿಟ್ ನ್ನು ಅವರು ವಿತರಿಸಿದರು.

‘ಉರಗ ಮಿತ್ರ’ ಸನ್ಮಾನವನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ನ್ಯಾಯವಾದಿ ಧನಂಜಯ್ ರಾವ್, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೀಡಿ ಗೌರವಿಸಿದರು.

ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಅರುಣ್ ಕುಕ್ಕಾವು, ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಸಚಿನ್ ವರ್ಧನ್ ದಿನೇಶ್ ಕೋಟ್ಯಾನ್, ವಿನಯ್ ಗುರಿಪಲ್ಲ ವಿನೋದ್ ಶೆಣೈ, ಸುರೇಶ್ ಕುಲಾಲ್, ಸುರೇಂದ್ರ ಕೋಟ್ಯಾನ್, ಅನಿಲ್ ಉಜಿರೆಉಪಸ್ಥಿತರಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!