25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ ಮತ್ತು ಸ್ವ – ಉದ್ಯೋಗ’ ಶೀರ್ಷಿಕೆಯಡಿಯಲ್ಲಿ ಸ್ವ- ಉದ್ಯೋಗ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ, ಸ್ವ – ಉದ್ಯೋಗಿ ಹಾಗೂ ಕಡಿರುದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷೆ ಜ್ಯೋತಿ ಮಾತನಾಡಿ ಉಳಿತಾಯದ ಮಹತ್ವ, ಸ್ವ – ಉದ್ಯೋಗ ಆರಂಭದಲ್ಲಿ ಎದುರಾಗುವ ಸವಾಲುಗಳು, ಸ್ವ – ಉದ್ಯೋಗದಿಂದಾಗುವ ಅನುಕೂಲಗಳು ಹಾಗೂ ಅದರಿಂದ ಸಿಗುವ ಆರ್ಥಿಕ ಸ್ವಾತಂತ್ರ್ಯ ಹಾಗೂ ಭದ್ರತೆಯ ಬಗ್ಗೆ ಸ್ವಂತ ಅನುಭವದ ಉದಾಹರಣೆಯ ಮೂಲಕ ಮಹಿಳೆಯರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವ್ಯ ವಹಿಸಿದ್ದರು. LCRP ಪುಷ್ಪಾವತಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್, ಯಶ್ಮಿತಾ ಎ ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!