ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ ಮತ್ತು ಸ್ವ – ಉದ್ಯೋಗ’ ಶೀರ್ಷಿಕೆಯಡಿಯಲ್ಲಿ ಸ್ವ- ಉದ್ಯೋಗ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿ, ಸ್ವ – ಉದ್ಯೋಗಿ ಹಾಗೂ ಕಡಿರುದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷೆ ಜ್ಯೋತಿ ಮಾತನಾಡಿ ಉಳಿತಾಯದ ಮಹತ್ವ, ಸ್ವ – ಉದ್ಯೋಗ ಆರಂಭದಲ್ಲಿ ಎದುರಾಗುವ ಸವಾಲುಗಳು, ಸ್ವ – ಉದ್ಯೋಗದಿಂದಾಗುವ ಅನುಕೂಲಗಳು ಹಾಗೂ ಅದರಿಂದ ಸಿಗುವ ಆರ್ಥಿಕ ಸ್ವಾತಂತ್ರ್ಯ ಹಾಗೂ ಭದ್ರತೆಯ ಬಗ್ಗೆ ಸ್ವಂತ ಅನುಭವದ ಉದಾಹರಣೆಯ ಮೂಲಕ ಮಹಿಳೆಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವ್ಯ ವಹಿಸಿದ್ದರು. LCRP ಪುಷ್ಪಾವತಿ ಉಪಸ್ಥಿತರಿದ್ದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್, ಯಶ್ಮಿತಾ ಎ ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.












