24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ ಮತ್ತು ಸ್ವ – ಉದ್ಯೋಗ’ ಶೀರ್ಷಿಕೆಯಡಿಯಲ್ಲಿ ಸ್ವ- ಉದ್ಯೋಗ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ, ಸ್ವ – ಉದ್ಯೋಗಿ ಹಾಗೂ ಕಡಿರುದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷೆ ಜ್ಯೋತಿ ಮಾತನಾಡಿ ಉಳಿತಾಯದ ಮಹತ್ವ, ಸ್ವ – ಉದ್ಯೋಗ ಆರಂಭದಲ್ಲಿ ಎದುರಾಗುವ ಸವಾಲುಗಳು, ಸ್ವ – ಉದ್ಯೋಗದಿಂದಾಗುವ ಅನುಕೂಲಗಳು ಹಾಗೂ ಅದರಿಂದ ಸಿಗುವ ಆರ್ಥಿಕ ಸ್ವಾತಂತ್ರ್ಯ ಹಾಗೂ ಭದ್ರತೆಯ ಬಗ್ಗೆ ಸ್ವಂತ ಅನುಭವದ ಉದಾಹರಣೆಯ ಮೂಲಕ ಮಹಿಳೆಯರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವ್ಯ ವಹಿಸಿದ್ದರು. LCRP ಪುಷ್ಪಾವತಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್, ಯಶ್ಮಿತಾ ಎ ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
error: Content is protected !!