23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

ಕಲ್ಮಂಜ: ಅಂತರಬೈಲ್‌ನ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮ ಹಾಗೂ ನಾಗದೇವರ ಪ್ರತಿಷ್ಠಾ ಮಹೋತ್ಸವವು ಎ10ರಂದು ಗುರುದೇವ ಮಠದ ಮಹಾಮಂಡಲೇಶ್ವರರಾದ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತೀಜಿ ಮಹಾರಾಜರ ಕೃಪಾಶೀರ್ವಾದಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ತಂತ್ರಿವರ್ಯರಾದ ವೇದಮೂರ್ತಿ ಶ್ರೀ ವಿಷ್ಣುಮೂರ್ತಿ ಹೆಬ್ಬಾರ್ ಮುಂಡ್ರುಪ್ಪಾಡಿ, ಧರ್ಮಸ್ಥಳ ಹಾಗೂ ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಅವರ ನೇತೃತ್ವದಲ್ಲಿ ನಡೆಯಿತು.

ಕ್ಷೇತ್ರದ ಮೂಲಶಕ್ತಿಗಳಾದ ಬ್ರಹ್ಮ ಮತ್ತು ನಾಗದೇವರ ಪ್ರತಿಷ್ಠೆಗಾಗಿ ಕಾನಂಗಿನ ಕಾಡಿನ ಬೆಟ್ಟದ ತೀರ್ಥಕೊಳದಿಂದ ತೀರ್ಥವನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಕ್ಷೇತ್ರಕ್ಕೆ ತಂದು ಕಲಶಾಭಿಷೇಕ ನೆರವೇರಿಸಿ ಪ್ರತಿಷ್ಠಾ ಕಾರ್ಯವನ್ನು ಯಶಸ್ವಿಯಾಗಿ ಊರ-ಪರಊರ ಭಕ್ತರ ಸಹಕಾರದೊಂದಿಗೆ ವೈಭವಯುತವಾಗಿ ಜರುಗಿತು.

ಮುಖ್ಯ ಅತಿಥಿಗಳಾದ ಅರ್ಚನಾ ಪೈ ಮತ್ತು ರಾಜೇಶ್ ಪೈ ಸಂಧ್ಯಾ ಗ್ರೂಪ್ಸ್ ಉಜಿರೆ, ರತ್ನಾಕರ ಹೆಗ್ಡೆ ಮಹಾವೀರ ಗ್ರೂಪ್ಸ್ ಉಜಿರೆ, ಸೇವಾ ಭಾರತಿ,ಕನ್ಯಾಡಿ ಇದರ ಅಧ್ಯಕ್ಷರಾದ ವಿನಾಯಕ ರಾವ್ ಅಜ್ಜೋಳಿಗೆ, ವೀರ ಕೇಸರಿ ಬೆಳ್ತಂಗಡಿ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಧರ್ಮಸ್ಥಳ, ಶೇಖರ್ ಟಿ. ನಿವೃತ್ತ ಮ್ಯಾನೇಜರ್ ಮಂಜುಶ್ರೀ ಪ್ರಿಂಟರ್ಸ್ ಉಜಿರೆ, ಹರೀಶ್ ಸಿ.ಎ ಬೆಂಗಳೂರು ಹಾಗೂ ವಿವಿಧ ಗಣ್ಯರು ಮತ್ತು ಪುರೋಹಿತ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ತುಕಾರಾಮ ಸಾಲಿಯನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಸಂಯೋಜಕ ನವೀನ್ ಪ್ರಕಾಶ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಗೌಡ ಹೂಂಕ್ರೊಟ್ಟು, ಖಜಾಂಚಿಗಳಾದ ಮಂಜುನಾಥ್ ಗುಡಿಗಾರ್, ಶ್ರೀನಿವಾಸ್ ಗೌಡ ಬೆದ್ರಕಾಡು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!