September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ ಮತ್ತು ಸ್ವ – ಉದ್ಯೋಗ’ ಶೀರ್ಷಿಕೆಯಡಿಯಲ್ಲಿ ಸ್ವ- ಉದ್ಯೋಗ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ, ಸ್ವ – ಉದ್ಯೋಗಿ ಹಾಗೂ ಕಡಿರುದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷೆ ಜ್ಯೋತಿ ಮಾತನಾಡಿ ಉಳಿತಾಯದ ಮಹತ್ವ, ಸ್ವ – ಉದ್ಯೋಗ ಆರಂಭದಲ್ಲಿ ಎದುರಾಗುವ ಸವಾಲುಗಳು, ಸ್ವ – ಉದ್ಯೋಗದಿಂದಾಗುವ ಅನುಕೂಲಗಳು ಹಾಗೂ ಅದರಿಂದ ಸಿಗುವ ಆರ್ಥಿಕ ಸ್ವಾತಂತ್ರ್ಯ ಹಾಗೂ ಭದ್ರತೆಯ ಬಗ್ಗೆ ಸ್ವಂತ ಅನುಭವದ ಉದಾಹರಣೆಯ ಮೂಲಕ ಮಹಿಳೆಯರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವ್ಯ ವಹಿಸಿದ್ದರು. LCRP ಪುಷ್ಪಾವತಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್, ಯಶ್ಮಿತಾ ಎ ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya
error: Content is protected !!