23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ ಮತ್ತು ಸ್ವ – ಉದ್ಯೋಗ’ ಶೀರ್ಷಿಕೆಯಡಿಯಲ್ಲಿ ಸ್ವ- ಉದ್ಯೋಗ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ, ಸ್ವ – ಉದ್ಯೋಗಿ ಹಾಗೂ ಕಡಿರುದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷೆ ಜ್ಯೋತಿ ಮಾತನಾಡಿ ಉಳಿತಾಯದ ಮಹತ್ವ, ಸ್ವ – ಉದ್ಯೋಗ ಆರಂಭದಲ್ಲಿ ಎದುರಾಗುವ ಸವಾಲುಗಳು, ಸ್ವ – ಉದ್ಯೋಗದಿಂದಾಗುವ ಅನುಕೂಲಗಳು ಹಾಗೂ ಅದರಿಂದ ಸಿಗುವ ಆರ್ಥಿಕ ಸ್ವಾತಂತ್ರ್ಯ ಹಾಗೂ ಭದ್ರತೆಯ ಬಗ್ಗೆ ಸ್ವಂತ ಅನುಭವದ ಉದಾಹರಣೆಯ ಮೂಲಕ ಮಹಿಳೆಯರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವ್ಯ ವಹಿಸಿದ್ದರು. LCRP ಪುಷ್ಪಾವತಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್, ಯಶ್ಮಿತಾ ಎ ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
error: Content is protected !!