September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

ಕಲ್ಲೇರಿ: 800 ನೂರು ವರ್ಷಗಳ ಇತಿಹಾಸವಿರುವ ಕರಾಯ ಗ್ರಾಮದ ಆರಾಧ್ಯಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಬ್ರಹ್ಮರಥದ ಶೋಭಾಯಾತ್ರೆ ಎ.13 ರಂದು ಸೋಮವಾರ ಸಂಜೆ ನಡೆಯಿತು.

ಹಲೇಜಿ ಶ್ರೀ ತನ್ನೋಜಿ ಮಹಾಲಿಂಗೇಶ್ವರ ದೇವಸ್ಥಾನ ಬಳಿಯಿಂದ ವೈದಿಕ ವಿಧಿವಿಧಾನಗಳೊಂದಿಗೆ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷರುಗಳಾದ ಶಾಸಕ ಹರೀಶ್ ಪೂಂಜಾ ಹಾಗೂ ನಾಗಾರ್ಜುನ್ ರಾವ್ ತೆಂಗಿನಕಾಯಿ ಒಡೆದು ಶೋಭಾಯಾತ್ರೆಗೆ ಚಾಲನೆ ನೀಡಿದರು. ದಿ| ವಿಜಯ ಎನ್. ಬಂಗೇರ ಮತ್ತು ದಿ| ಕೆ. ನಾಣ್ಯಪ್ಪ ಬಂಗೇರ ಇವರ ಸ್ಮರಣಾರ್ಥವಾಗಿ ಮಕ್ಕಳ ಕೊಡುಗೆಯಾಗಿ ಬ್ರಹ್ಮರಥ ಅರ್ಪಿಸಲಾಯಿತು.

ಪೂರ್ಣಕುಂಭಸ್ವಾಗತ, ವೀರಗಾಸೆ, ಕೇರಳ ತೈಯಮ್, ಡೊಳ್ಳು ಕುಣಿತ, ವಾಯಲಿನ್, ಚೆಂಡೆ, ಭಜನ ತಂಡ, ಕೀಳು ಕುದರೆ, ವಾದ್ಯಗೋಷ್ಠಿಯಲ್ಲಿ ರಥವನ್ನು ದೇವಸ್ಥಾನಕ್ಕೆ ವೈಭವಪೂರ್ಣವಾಗಿ ತರಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ರಥದ ಜತೆಯಲ್ಲಿ ಹೆಜ್ಜೆ ಹಾಕಿದರು. ಅಲ್ಲಲ್ಲಿ ಬ್ರಹ್ಮರಥಕ್ಕೆ ಪುರ್ಷ್ಪಾಚನೆ ನಡೆಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅತುಲ್ ಕುಮಾರ್ ಕೆ.ಎನ್.ಹಲೇಜಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ,  ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರಾ ಹಾಗೂ ಜಯವಿಕ್ರಮ್ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ದುರ್ಗೇಶ್ ವಿ.ಕೆದಿಲಾಯ, ಕೋಶಾಧಿಕಾರಿ ಸಾಮ್ರಾಟ್ ಕರ್ಕೇರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ್ ಸುಪ್ರಭಾತ ಕೊಲ್ಲಿ, ಉಪಾಧ್ಯಕ್ಷ ಯುವರಾಜ್ ಅನಾರು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಉಪಾಧ್ಯಕ್ಷ ಸುನೀಲ್ ಅಣಾವು, ನಿದೇರ್ಶಕರಾದ
ಸುರೇಶ್ ಹೆಚ್ ಎಲ್, ರೋಹಿತ್,  ಪ್ರಮುಖರಾದ ಸುಧೀರ್ ಕೆ. ಎನ್., ಗುಣಾಕರ ಅಗ್ನಾಡಿ, ಪ್ರದೀಪ್ ಶೆಟ್ಟಿ, ಯೋಗೀಶ್ ಪೂಜಾರಿ ಕಡ್ತಿಲ,  ಪ್ರವೀಣ್ ಕುಪ್ಪೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya
error: Content is protected !!