23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬೆಳ್ತಂಗಡಿ; ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು.

ಸಂಜೆ ಚೌಕಿಯಲ್ಲಿ ಶ್ರೀ ದೇವಿಯ ಮಹಾಪೂಜೆ ನೆರವೇರಿದ ಬಳಿಕ ವಿದ್ಯುತ್ ದೀಪಾಂಕೃತ ರಂಗಸ್ಥಳದಲ್ಲಿ ಶ್ರೀ ದೇವಿ ಮಹಾತ್ಮೆ ಕಥಾಭಾಗವು ಪ್ರದರ್ಶನಗೊಳ್ಳವುದರ ಮೂಲಕ ಯಕ್ಷಗಾನ ಕಲಾಪ್ರೇಮಿಗಳಿಗೆ ರಸದೌತಣ ನೀಡಿತು. ರಾತ್ರಿ ಯಕ್ಷಗಾನವನ್ನು ವೀಕ್ಷಿಸುವುದಕ್ಕೆ ಬಂದಂತಹ ಸರ್ವರಿಗೂ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಶಾಸಕ ಹರೀಶ್ ಪೂಂಜ, ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಮೇಲಂತಬೆಟ್ಟು ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಬಂಧು, ಬಳಗದವರು, ಊರವರು, ಇತರರು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

ಯಕ್ಷಗಾನ ಮೊದಲು ಬಳಂಜ ಸುವರ್ಣ ನಿಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸಿ,ಮೆರವಣಿಗೆ ಮೂಲಕ ರಂಗಸ್ಥಳಕ್ಕೆ ಆಗಮಿಸಲಾಯಿತು. ನಾಲ್ಕು ಭಜನಾ ತಂಡಗಳನ್ನು ಗೌರವಿಸಲಾಯಿತು.ಸಾವಿರಕ್ಕೂ ಅಧಿಕ ಕಲಾಭಿಮಾನಿಗಳು ಭಾಗವಹಿಸಿದರು.

ಶ್ರೀಮತಿ ಮೀನಾಕ್ಷಿ-ಸಾಂತಪ್ಪ ಸುವರ್ಣ, ಮಧುಕರ್, ಮನೋಹರ್ ಬಳಂಜ,ಮಹೇಂದ್ರ ಹಾಗೂ ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya
error: Content is protected !!