23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಎ.14ರಂದು ಆಚರಿಸಲಾಯಿತು. ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಹತ್ವ ಪಡೆದುಕೊಂಡಿತು.

ಅಂಬೇಡ್ಕರ್ ಜಯಂತಿ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಪ್ರತೀಕವಾಗಿದೆ. ಅವರ ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಗೌರವವನ್ನು ಖಚಿತಪಡಿಸಲಾಗಿದೆ.

 ಕರಕುಶಲ ಶಿಕ್ಷಕಿ ಹೇಮಾವತಿ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳ ಹಾಗೂ ಸಂವಿಧಾನ ರಚನೆಯ ಬಗ್ಗೆ ಮಾತನಾಡಿದರು. ಸಮಾಜದ ಹಿಂದುಳಿದ ವರ್ಗಗಳ ಹಕ್ಕಿಗಾಗಿ ನಿರಂತರ ಹೋರಾಟ ನಡೆಸಿದ ನಾಯಕತ್ವವನ್ನು ಅವರು ತೋರಿದರು. ಶಿಕ್ಷಣದ ಮೂಲಕ ವ್ಯಕ್ತಿಯ ಜೀವನದಲ್ಲಿ ಬದಲಾವಣೆ ತರಬಹುದು ಎಂಬುದನ್ನು ತಮ್ಮ ಜೀವನದ ಮೂಲಕ ಉದಾಹರಣೆಯಾಗಿ ಸ್ಥಾಪಿಸಿದರು. ಭಾರತದ ಸಂವಿಧಾನ ರಚನೆಯ ಮೂಲಕ ದೇಶಕ್ಕೆ ಬಲವಾದ ಕಾನೂನು ವ್ಯವಸ್ಥೆಯನ್ನು ನೀಡಿದ ಮಹಾನ್ ಚಿಂತಕ ಎಂಬ ಗೌರವ ಅವರಿಗೆ ಸೇರಿದೆ. ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯಿಂದ  ಆರಂಭಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಸಂವಿಧಾನ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ಉದ್ಘಾಟಿಸಿದರು.ನಂತರ ಎಲ್ಲರೂ ಸೇರಿ ಸಂವಿಧಾನ ಪೀಠಿಕೆಯನ್ನು ಪಠಿಸಿದರು.

 ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ದಿವ್ಯ ಟಿವಿ ಹಾಗೂ ಮಕ್ಕಳ ಪ್ರತಿನಿಧಿಗಳಾದ ಪವನ್ ಮತ್ತು ರೆನ್ಸನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು. ವಿಶೇಷ ಶಿಕ್ಷಕಿ ಪ್ರಿಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಡಿ.5: ವಿದ್ಯುತ್ ನಿಲುಗಡೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!