25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಎ. 14 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸೂರ್ಯ ಮುಖ್ಯ ಭಾಷಣ ಮಾಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ. ಪಂ. ಇಓ ಭವಾನಿಶಂಕರ್ ಎನ್., ಪ. ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಧನಂಜಯ್ ಎನ್. ಎಸ್ ಉಪಸ್ಥಿತರಿದ್ದರು.

ವೇಣೂರು ಸ. ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಡಾ. ಬಿ. ಆರ್. ಅಂಬೇಡ್ಕರ್ ಕುರಿತು ಭಾಷಣಗೈದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ ಸ್ವಾಗತಿಸಿ, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಅಂಕಾಜೆ ವಂದಿಸಿ, ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ನಿರೂಪಿಸಿದರು.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಪ. ಜಾತಿ ಮತ್ತು ಪ. ಪಂಗಡ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!