ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ನೆರವೇರಿಸಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವೆಂದು ತಿಳಿಸಿ, ಅವರ ಚಿಂತನೆಗಳನ್ನು ಅನುಸರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.












