September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಎ.14ರಂದು ಆಚರಿಸಲಾಯಿತು. ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಹತ್ವ ಪಡೆದುಕೊಂಡಿತು.

ಅಂಬೇಡ್ಕರ್ ಜಯಂತಿ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಪ್ರತೀಕವಾಗಿದೆ. ಅವರ ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಗೌರವವನ್ನು ಖಚಿತಪಡಿಸಲಾಗಿದೆ.

 ಕರಕುಶಲ ಶಿಕ್ಷಕಿ ಹೇಮಾವತಿ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳ ಹಾಗೂ ಸಂವಿಧಾನ ರಚನೆಯ ಬಗ್ಗೆ ಮಾತನಾಡಿದರು. ಸಮಾಜದ ಹಿಂದುಳಿದ ವರ್ಗಗಳ ಹಕ್ಕಿಗಾಗಿ ನಿರಂತರ ಹೋರಾಟ ನಡೆಸಿದ ನಾಯಕತ್ವವನ್ನು ಅವರು ತೋರಿದರು. ಶಿಕ್ಷಣದ ಮೂಲಕ ವ್ಯಕ್ತಿಯ ಜೀವನದಲ್ಲಿ ಬದಲಾವಣೆ ತರಬಹುದು ಎಂಬುದನ್ನು ತಮ್ಮ ಜೀವನದ ಮೂಲಕ ಉದಾಹರಣೆಯಾಗಿ ಸ್ಥಾಪಿಸಿದರು. ಭಾರತದ ಸಂವಿಧಾನ ರಚನೆಯ ಮೂಲಕ ದೇಶಕ್ಕೆ ಬಲವಾದ ಕಾನೂನು ವ್ಯವಸ್ಥೆಯನ್ನು ನೀಡಿದ ಮಹಾನ್ ಚಿಂತಕ ಎಂಬ ಗೌರವ ಅವರಿಗೆ ಸೇರಿದೆ. ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯಿಂದ  ಆರಂಭಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಸಂವಿಧಾನ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ಉದ್ಘಾಟಿಸಿದರು.ನಂತರ ಎಲ್ಲರೂ ಸೇರಿ ಸಂವಿಧಾನ ಪೀಠಿಕೆಯನ್ನು ಪಠಿಸಿದರು.

 ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ದಿವ್ಯ ಟಿವಿ ಹಾಗೂ ಮಕ್ಕಳ ಪ್ರತಿನಿಧಿಗಳಾದ ಪವನ್ ಮತ್ತು ರೆನ್ಸನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು. ವಿಶೇಷ ಶಿಕ್ಷಕಿ ಪ್ರಿಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya
error: Content is protected !!