23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಎ.14ರಂದು ಆಚರಿಸಲಾಯಿತು. ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಹತ್ವ ಪಡೆದುಕೊಂಡಿತು.

ಅಂಬೇಡ್ಕರ್ ಜಯಂತಿ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಪ್ರತೀಕವಾಗಿದೆ. ಅವರ ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಗೌರವವನ್ನು ಖಚಿತಪಡಿಸಲಾಗಿದೆ.

 ಕರಕುಶಲ ಶಿಕ್ಷಕಿ ಹೇಮಾವತಿ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳ ಹಾಗೂ ಸಂವಿಧಾನ ರಚನೆಯ ಬಗ್ಗೆ ಮಾತನಾಡಿದರು. ಸಮಾಜದ ಹಿಂದುಳಿದ ವರ್ಗಗಳ ಹಕ್ಕಿಗಾಗಿ ನಿರಂತರ ಹೋರಾಟ ನಡೆಸಿದ ನಾಯಕತ್ವವನ್ನು ಅವರು ತೋರಿದರು. ಶಿಕ್ಷಣದ ಮೂಲಕ ವ್ಯಕ್ತಿಯ ಜೀವನದಲ್ಲಿ ಬದಲಾವಣೆ ತರಬಹುದು ಎಂಬುದನ್ನು ತಮ್ಮ ಜೀವನದ ಮೂಲಕ ಉದಾಹರಣೆಯಾಗಿ ಸ್ಥಾಪಿಸಿದರು. ಭಾರತದ ಸಂವಿಧಾನ ರಚನೆಯ ಮೂಲಕ ದೇಶಕ್ಕೆ ಬಲವಾದ ಕಾನೂನು ವ್ಯವಸ್ಥೆಯನ್ನು ನೀಡಿದ ಮಹಾನ್ ಚಿಂತಕ ಎಂಬ ಗೌರವ ಅವರಿಗೆ ಸೇರಿದೆ. ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯಿಂದ  ಆರಂಭಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಸಂವಿಧಾನ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ಉದ್ಘಾಟಿಸಿದರು.ನಂತರ ಎಲ್ಲರೂ ಸೇರಿ ಸಂವಿಧಾನ ಪೀಠಿಕೆಯನ್ನು ಪಠಿಸಿದರು.

 ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ದಿವ್ಯ ಟಿವಿ ಹಾಗೂ ಮಕ್ಕಳ ಪ್ರತಿನಿಧಿಗಳಾದ ಪವನ್ ಮತ್ತು ರೆನ್ಸನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು. ವಿಶೇಷ ಶಿಕ್ಷಕಿ ಪ್ರಿಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!