July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಎ. 14 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸೂರ್ಯ ಮುಖ್ಯ ಭಾಷಣ ಮಾಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ. ಪಂ. ಇಓ ಭವಾನಿಶಂಕರ್ ಎನ್., ಪ. ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಧನಂಜಯ್ ಎನ್. ಎಸ್ ಉಪಸ್ಥಿತರಿದ್ದರು.

ವೇಣೂರು ಸ. ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಡಾ. ಬಿ. ಆರ್. ಅಂಬೇಡ್ಕರ್ ಕುರಿತು ಭಾಷಣಗೈದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ ಸ್ವಾಗತಿಸಿ, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಅಂಕಾಜೆ ವಂದಿಸಿ, ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ನಿರೂಪಿಸಿದರು.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಪ. ಜಾತಿ ಮತ್ತು ಪ. ಪಂಗಡ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya
error: Content is protected !!