26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು.

ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಬಲಿಪ ರೆಸಾರ್ಟ್‌ ಮಾಲಕರು ಬೆಳ್ತಂಗಡಿ ತಾಲೂಕಿನ ಲಯನ್ಸ್ ಕ್ಲಬ್ ಅಧ್ಯಕ್ಷ ರಾದ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್ ದಂಪತಿಗಳಿಂದ ದೀಪ ಬೆಳಗಿಸುವ ಮೂಲಕ ಚಾಲನೆಗೊಂಡಿತು.

ವೇದಿಕೆಯಲ್ಲಿ ಇತ್ತೀಚಿಗೆ ರಾಷ್ಟ್ರ ಪ್ರಶಸ್ತಿ ಪಡೆದ ದ.ಕ ಜಿಲ್ಲಾ ಎಕೆಎಮ್ಎಸ್ಎಸ್ ಗೌರವಾಧ್ಯಕ್ಷರು ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ದಂಪತಿಗಳನ್ನು ಮತ್ತು ಲಯನ್ ಮುರಳ ಬಲಿಪ ದಂಪತಿಗಳನ್ನು ಸನ್ಮಾನಿಸಲಾಯಿತು.

‌ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಮ್.ಕೆ ಮಣಿ ಕಾರ್ಯದರ್ಶಿ ಸುರೇಶ್ ಗೌಡ ಅಧ್ಯಕ್ಷ ತಂಗಚ್ಚನ್ ದಂಪತಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಕುಟುಂಬದ ಸದಸ್ಯರು ಭಾಗವಹಿಸಿದರು. ಮಹಿಳೆಯರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆದವು. ಮಧ್ಯಾಹ್ನದ ಭೋಜನದ ನಂತರ ಮಕ್ಕಳು ಈಜು ಕೊಳದಲ್ಲಿ ಈಜಾಡಿ ಪೂರ್ಣ ಪ್ರಮಾಣದ ರಜೆಯ ಮಜಾ ಅನುಭವಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ವಿಕ್ರಂ ಗೌಡ ನಿರೂಪಿಸಿ, ಸುರೇಶ್ ಗೌಡ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya
error: Content is protected !!