July 23, 2026
Uncategorized

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಲಾಯಿಲ ಸಂಗಮ ಸಭಾಭವನದಲ್ಲಿ, ನಡೆದ BLA-2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವರಾಂ ಮಾತನಾಡಿ ಎಸ್‌ಐಆರ್‍‌ ಎನ್ನುವುದು ಬಿಜೆಪಿಯ ವಿರೋಧಿ ಮತಗಳನ್ನೇ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ. ಚುನಾವಣಾ ಆಯೋಗವು, ‘ಮತದಾರರ ಪಟ್ಟಿಯಲ್ಲಿ ತಪ್ಪುಗಳಿವೆ’ ಅದನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಇದು ಪರಿಷ್ಕರಣೆ ಅಲ್ಲ. ಪರಿಷ್ಕರಣೆ ಎಂದರೇನು? ಈಗಿರುವ ಪಟ್ಟಿಯಲ್ಲಿ ತಿದ್ದುಪಡಿ ಮಾಡುವುದು, ಇರುವುದಕ್ಕೆ ಒಂದಷ್ಟು ಸೇರಿಸಿ ಒಂದಷ್ಟು ತೆಗೆದು ಪರಿಷ್ಕರಿಸುವುದು. ಆದರೆ, ಈ ಎಸ್‌ಐಆರ್, ಹೊಸದಾಗಿ ಖಾಲಿ ಕಾಗದದಲ್ಲಿ ಮಾಡುತ್ತಿರುವ ಹೊಸ ಮತದಾರರ ಪಟ್ಟಿ. ಅಂದರೆ, ನೀವು ಈಗಾಗಲೇ 15 ಚುನಾವಣೆಗಳಲ್ಲಿ ವೋಟ್‌ ಮಾಡಿರುವವರಾಗಿದ್ದರೂ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನೀವು ಪಾಲ್ಗೊಳ್ಳದಿದ್ದರೆ ನಿಮ್ಮ ಹೆಸರು ಡಿಲೀಟ್‌ ಆಗುತ್ತದೆ. ಈ ಮೂಲಕ ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಮೆಸ್ಕಾಂ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ತರಬೇತಿಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕೆಂದರುತರಬೇತಿ ಮತ್ತು ಮಾಹಿತಿ ಕಾರ್ಯಾಗಾರದಸಂಪನ್ಮೂಲ ವ್ಯಕ್ತಿಗಳಾಗಿಡಾ. ಎಚ್.ವಿ ವಾಸು, ಬೆಂಗಳೂರು ಮೋಹನ್ ಜಿ.ಕೆ, ಮೈಸೂರು ಸಂತೋಷ್‌.ಜಿ, ಬೆಂಗಳೂರು ನಿಜಾರ್‌ ಅಹಮ್ಮದ್, ಬೆಂಗಳೂರು ನಡೆಸಿಕೊಟ್ಟರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟಣ, ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಉಪಸ್ಥಿತರಿದ್ದರು . ಕಾರ್ಯಾಗಾರದಲ್ಲಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಎಲ್ಎ 2 ಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya
error: Content is protected !!