25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಲಾಯಿಲ ಸಂಗಮ ಸಭಾಭವನದಲ್ಲಿ, ನಡೆದ BLA-2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವರಾಂ ಮಾತನಾಡಿ ಎಸ್‌ಐಆರ್‍‌ ಎನ್ನುವುದು ಬಿಜೆಪಿಯ ವಿರೋಧಿ ಮತಗಳನ್ನೇ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ. ಚುನಾವಣಾ ಆಯೋಗವು, ‘ಮತದಾರರ ಪಟ್ಟಿಯಲ್ಲಿ ತಪ್ಪುಗಳಿವೆ’ ಅದನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಇದು ಪರಿಷ್ಕರಣೆ ಅಲ್ಲ. ಪರಿಷ್ಕರಣೆ ಎಂದರೇನು? ಈಗಿರುವ ಪಟ್ಟಿಯಲ್ಲಿ ತಿದ್ದುಪಡಿ ಮಾಡುವುದು, ಇರುವುದಕ್ಕೆ ಒಂದಷ್ಟು ಸೇರಿಸಿ ಒಂದಷ್ಟು ತೆಗೆದು ಪರಿಷ್ಕರಿಸುವುದು. ಆದರೆ, ಈ ಎಸ್‌ಐಆರ್, ಹೊಸದಾಗಿ ಖಾಲಿ ಕಾಗದದಲ್ಲಿ ಮಾಡುತ್ತಿರುವ ಹೊಸ ಮತದಾರರ ಪಟ್ಟಿ. ಅಂದರೆ, ನೀವು ಈಗಾಗಲೇ 15 ಚುನಾವಣೆಗಳಲ್ಲಿ ವೋಟ್‌ ಮಾಡಿರುವವರಾಗಿದ್ದರೂ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನೀವು ಪಾಲ್ಗೊಳ್ಳದಿದ್ದರೆ ನಿಮ್ಮ ಹೆಸರು ಡಿಲೀಟ್‌ ಆಗುತ್ತದೆ. ಈ ಮೂಲಕ ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಮೆಸ್ಕಾಂ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ತರಬೇತಿಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕೆಂದರುತರಬೇತಿ ಮತ್ತು ಮಾಹಿತಿ ಕಾರ್ಯಾಗಾರದಸಂಪನ್ಮೂಲ ವ್ಯಕ್ತಿಗಳಾಗಿಡಾ. ಎಚ್.ವಿ ವಾಸು, ಬೆಂಗಳೂರು ಮೋಹನ್ ಜಿ.ಕೆ, ಮೈಸೂರು ಸಂತೋಷ್‌.ಜಿ, ಬೆಂಗಳೂರು ನಿಜಾರ್‌ ಅಹಮ್ಮದ್, ಬೆಂಗಳೂರು ನಡೆಸಿಕೊಟ್ಟರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟಣ, ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಉಪಸ್ಥಿತರಿದ್ದರು . ಕಾರ್ಯಾಗಾರದಲ್ಲಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಎಲ್ಎ 2 ಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya
error: Content is protected !!