September 6, 2026
Uncategorized

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಲಾಯಿಲ ಸಂಗಮ ಸಭಾಭವನದಲ್ಲಿ, ನಡೆದ BLA-2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವರಾಂ ಮಾತನಾಡಿ ಎಸ್‌ಐಆರ್‍‌ ಎನ್ನುವುದು ಬಿಜೆಪಿಯ ವಿರೋಧಿ ಮತಗಳನ್ನೇ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ. ಚುನಾವಣಾ ಆಯೋಗವು, ‘ಮತದಾರರ ಪಟ್ಟಿಯಲ್ಲಿ ತಪ್ಪುಗಳಿವೆ’ ಅದನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಇದು ಪರಿಷ್ಕರಣೆ ಅಲ್ಲ. ಪರಿಷ್ಕರಣೆ ಎಂದರೇನು? ಈಗಿರುವ ಪಟ್ಟಿಯಲ್ಲಿ ತಿದ್ದುಪಡಿ ಮಾಡುವುದು, ಇರುವುದಕ್ಕೆ ಒಂದಷ್ಟು ಸೇರಿಸಿ ಒಂದಷ್ಟು ತೆಗೆದು ಪರಿಷ್ಕರಿಸುವುದು. ಆದರೆ, ಈ ಎಸ್‌ಐಆರ್, ಹೊಸದಾಗಿ ಖಾಲಿ ಕಾಗದದಲ್ಲಿ ಮಾಡುತ್ತಿರುವ ಹೊಸ ಮತದಾರರ ಪಟ್ಟಿ. ಅಂದರೆ, ನೀವು ಈಗಾಗಲೇ 15 ಚುನಾವಣೆಗಳಲ್ಲಿ ವೋಟ್‌ ಮಾಡಿರುವವರಾಗಿದ್ದರೂ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನೀವು ಪಾಲ್ಗೊಳ್ಳದಿದ್ದರೆ ನಿಮ್ಮ ಹೆಸರು ಡಿಲೀಟ್‌ ಆಗುತ್ತದೆ. ಈ ಮೂಲಕ ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಮೆಸ್ಕಾಂ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ತರಬೇತಿಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕೆಂದರುತರಬೇತಿ ಮತ್ತು ಮಾಹಿತಿ ಕಾರ್ಯಾಗಾರದಸಂಪನ್ಮೂಲ ವ್ಯಕ್ತಿಗಳಾಗಿಡಾ. ಎಚ್.ವಿ ವಾಸು, ಬೆಂಗಳೂರು ಮೋಹನ್ ಜಿ.ಕೆ, ಮೈಸೂರು ಸಂತೋಷ್‌.ಜಿ, ಬೆಂಗಳೂರು ನಿಜಾರ್‌ ಅಹಮ್ಮದ್, ಬೆಂಗಳೂರು ನಡೆಸಿಕೊಟ್ಟರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟಣ, ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಉಪಸ್ಥಿತರಿದ್ದರು . ಕಾರ್ಯಾಗಾರದಲ್ಲಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಎಲ್ಎ 2 ಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!