July 23, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

ಬೆಳ್ತಂಗಡಿ: ಗೇರುಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇಲ್ಲಿ ಕಳೆದ 13 ವರ್ಷಗಳಿಂದ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಸಾರ್ಥಕ ಸೇವೆ ಸಲ್ಲಿಸಿ ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆ, ಸವಣಾಲು ಇಲ್ಲಿಗೆ ವರ್ಗಾವಣೆಗೊಂಡ ಮಮತಾ ಅವರಿಗೆ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ. ಮಾತನಾಡಿ “ಒಂದೇ ಸಂಸ್ಥೆಯಲ್ಲಿ 13 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ಹಾಗೂ ಸಂಸ್ಥೆಯ ಶ್ರೇಯೋಭಿವೃದ್ಧಿಯಲ್ಲಿ ತೊಡಗಿಸಿಕೊಂಡ ಮಮತಾ ಅವರಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಮಮತಾ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಅತ್ಯಂತ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಮತಾ ಅವರು “ಈ ಸಂಸ್ಥೆಯಲ್ಲಿ ಕಳೆದ 13 ವರ್ಷಗಳು ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳು ಸಹೋದ್ಯೋಗಿಗಳ ಸಹಕಾರ ಮತ್ತು ಇಲ್ಲಿನ ಪರಿಸರ ನನ್ನ ವೃತ್ತಿ ಜೀವನಕ್ಕೆ ಹೆಚ್ಚಿನ ಶಕ್ತಿ ನೀಡಿದೆ” ಎಂದು ನುಡಿದರು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಕಾರ್ಯಧ್ಯಕ್ಷ ಗೋಪಾಲ ಗೌಡ ಹಾಗೂ ಇತರ ಸದಸ್ಯರು, ಶಿಕ್ಷಕ ವೃಂದದವರು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದು ಮಮತಾ ಅವರಿಗೆ ಶುಭ ಹಾರೈಸಿದರು. ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿ ರಮ್ಯಾ ಅಭಿನಂದಿಸಿದರು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!