ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು.
*ಬಂಧನದ ವಿವರ:* ಪ್ರಕರಣದ ಸಂಬಂಧ ವಿಚಾರಣೆಗಾಗಿ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನ ಬಸವನಗುಡಿ ಕಚೇರಿಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು.ಬೆಳ್ತಂಗಡಿ ಪೊಲೀಸರು ಸೊಕೊ ತಂಡದಿಂದ ಪುನೀತ್ ಕೆರೆಹಳ್ಳಿಯ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಸೂಕ್ತ ಠಾಣಾ ಜಾಮೀನಿನಲ್ಲಿ ರಾತ್ರಿ 9:45 ಕ್ಕೆ ಬಿಡುಗಡೆ ಮಾಡಿದ್ದಾರೆ.













