September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ ಮತ್ತು ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಎ.14ರಂದು ನಡೆಯಿತು.

ಆಲ್ಬಮ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿದ ಡಿ.ಸಿ.ಪಿ.ಡಾ.ಬಿ.ಶಂಕರ್ ಮಾತನಾಡಿ ಬಡೆಕ್ಕಾವಿನ ಭಕ್ತರ ರಕ್ಷಕ ತಾಯಿ ಅಪ್ಪೆ ಕಲ್ಲುರ್ಟಿ. ಧರ್ಮ, ಜಾತಿ, ಮತ, ಬೇದಗಳನ್ನು ತ್ಯಾಜಿಸಿ ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೈವದ ಕಾರಣೀಕ ಶಕ್ತಿ ಸಂಚಯನ ಇರುವ ಈ ಸ್ಥಳದಲ್ಲಿ ದೈವದ ಅನುಗ್ರಹದಿಂದ ಸ್ವಯಂ ಪ್ರೇರಣೆಯಿಂದ ಭಕ್ತರು ನಮ್ಮ ಮನೆಯ ಕಾರ್ಯಕ್ರಮದ್ದಂತೆ ಇಲ್ಲಿ ಕೆಲಸ ಮಾಡುತ್ತಿರುವುದು ವಿಶೇಷವಾಗಿದೆ. ಕ್ಷೇತ್ರಕ್ಕೆ ಆಗಮಿಸುವವರು ವ್ಯಕ್ತಿಯಾಗದೆ ಭಕ್ತರಾಗಿ ಬರುತ್ತಿದ್ದಾರೆ. ಬಡೆಕ್ಕಾವುಗುತ್ತಿನ ಮನೆತನದವರು ಸೌಮ್ಯತೆ ಲವಲವಿಕೆಯಿಂದ ಆಗಮಿಸಿದ ಭಕ್ತರು ಬರಮಾಡಿಕೊಳ್ಳುವ ವ್ಯವಸ್ಥೆ ಹೃದಯ ಶ್ರೀಮಂತಿಕೆ ಎಂದು ಆಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು ಮಾತನಾಡಿ ನಮ್ಮ ಆಚಾರ-ವಿಚಾರಗಳನ್ನು ಜೀವಂತವಾಗಿರಿಸಿಕೊAಡು ಊರಿನವರನ್ನೂ ಒಗ್ಗೂಡಿಸಿ ನಿರಂತರವಾಗಿ ಸೇವೆ ನಡೆಯುತ್ತ ಬರುತ್ತಿರುವುದು ಶ್ಲಾಘನೀಯ. ಜನರ ಬೆಂಬಲದೊಂದಿಗೆ ಶಿಸ್ತುಬದ್ಧ ಕಟ್ಟುಪಾಡು ಆಚರಣೆಗೆ ಬಡೆಕ್ಕಾವುಗುತ್ತು ಅನುಕರಣೀಯ ಎಂದರು.

ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಪ್ಪ ಪೂಜಾರಿ, ರವಿರಾಜ್ ಜೈನ್ ಬಡೆಕ್ಕಾವುಗುತ್ತು, ಉಜಿರೆ ಮಂದಾರ ಕಲಾವಿದರ ತಂಡದ ಅಧ್ಯಕ್ಷ ಗುಣಾಪಲ್ ಎಮ್.ಎಸ್, ಗಣೇಶ್ ಪಿ.ಎಸ್ ಇಂಚರ ನಾವೂರು,ಬಡೆಕ್ಕಾವುಗುತ್ತು ಮುಖ್ಯಸ್ಥ ರಕ್ಷಿತ್ ಅಜಿಲ, ವಸಂತ ಪೂಜಾರಿ ಇಡ್ಯಾಲ, ಪ್ರದೀಪ್ ಬೆಂಗಳೂರು, ಶಿವಣ್ಣ ಗೌಡ, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು ಸಹಿತ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ವತಿಯಿಂದ ಚಲನಚಿತ್ರದ ಬಾಲ ಕಲಾವಿದರಾದ ಲೈಟ್ ಹೌಸ್ ಖ್ಯಾತಿಯ ಅಚಲ್ ಜಿ.ಬಂಗೇರ, ಕಾಂತಾರ ಖ್ಯಾತಿಯ ಅಧ್ವಿಕ್ ಜಿ.ಬಂಗೇರ ಹಾಗೂ ಗಾಯಕಿ ಸಿಂಚನಾ ಲಾವುದಡಿ ಅವರನ್ನು ಸನ್ಮಾನಿಸಲಾಯಿತು. ರತ್ನಾಕರ್ ಬಿ.ನಾವೂರು ನನಸು ಪ್ರಸ್ತಾವಿಸಿ ಸ್ವಾಗತಿಸಿದರು. ರಾಜು ಕೆ.ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya
error: Content is protected !!