July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಏಪ್ರಿಲ್ 15ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ಎ.15ರಂದು ಉದ್ಘಾಟನೆಗೊಂಡಿತು.

ಸಮಾರಂಭವನ್ನು ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಪೂರಕ. ಹಾಗಾಗಿ ಪಠ್ಯ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು, ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದ ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದು, ತನ್ನ ಸಾಧನೆಗೂ ಈ ಕಾಲೇಜಿನ ಒತ್ತಾಸೆ ಇದೆ ಎಂಬುದಾಗಿ ತನ್ನ ವಿದ್ಯಾರ್ಥಿ ಜೀವನವನ್ನು ಸ್ಮರಿಸಿದರು.

ಮುಖ್ಯ ಅತಿಥಿ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ನಿರ್ದೇಶಕ ಡಾ. ಕರುಣಾಕರ್ ಶೆಟ್ಟಿ ಮಾತನಾಡಿ “ಅನೇಕ ವರ್ಷಗಳಿಂದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸುತ್ತ ಈ ಸಂಸ್ಥೆಯು ಬ್ಯಾಡ್ಮಿಂಟನ್ ಆಟಗಾರರನ್ನು ಪ್ರೋತ್ಸಾಹಿಸಿ ಕ್ರೀಡಾಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದೆ. ಪ್ರತಿಭೆಗೆ ಪೂರಕವಾಗಿ ಬೆಳೆಸುವ ಗುಣ ಈ ಸಂಸ್ಥೆಗೆ ಇದೆ”ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.

ಮುಖ್ಯ ಅತಿಥಿಗಳಾದ ಪ್ರೊಫೆಸರ್ ರಾಜನ್ ವಿ ಎನ್, ಫಾ |ಲ್ಯಾರಿ ಪಿಂಟೋ, ಫಾ| ದೀಪಕ್ ಡೇಸಾ, ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಶ್ರೀ ಸೂರಜ್ ಚಾರ್ಲ್ಸ್ ನ್ಯೂನಸ್,ಶ್ರೀ ನೆಲ್ಸನ್ ಲೆಸ್ರಾದೋ, ಶ್ರೀ ವಿಲ್ಸನ್ ರೂಪೇಶ್ ಮೊರಾಸ್ ಉಪಸ್ಥಿತರಿದ್ದು ಶುಭ ಹಾರೈಸಿದರು

ಸೇಕ್ರೆಡ್ ಹಾರ್ಟ್ ಕಾಲೇಜ್ ನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಕಾಶ್ ಡಿಸೋಜ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಈಶ್ವರ್ ಗೌಡ ಧನ್ಯವಾದವಿತ್ತರು. ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ ನೆಲ್ಸನ್ ಮೋನಿಸ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
error: Content is protected !!