September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡ ರುಚಿ ತೋರಿಸಿದ ಘಟನೆ ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.4ರಂದು ಸ್ವಚ್ಛತಾ ಶನಿವಾರ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯ ಸಾರ್ವಜನಿಕರ ರಸ್ತೆಯ ಬದಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡುವಾಗ ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಎಂಬುವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುರುವುದು ತ್ಯಾಜ್ಯ ವಸ್ತುಗಳಲ್ಲಿ ಸಿಕ್ಕಿರುವ ದಾಖಲೆಗಳಿಂದ ಕಂಡು ಬಂದಿರುತ್ತದೆ. ತಾವು ಓರ್ವ ಜವಾಬ್ದಾರಿಯುವ ಗ್ರಾಮಸ್ಥರಾಗಿ ಅಲ್ಲದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ನೀವು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿಯಯನ್ನು ವಹಿಸಬೇಕಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಮನೆಯಲ್ಲಿನ ಹಳೆಯ ತ್ಯಾಜ್ಯಗಳನ್ನು ಎಸಗಿದ ಕಾರಣ ನಿಡ್ಲೆ ಗ್ರಾಮ ಪಂಚಾಯತ್ 1,035ರೂ.ನಂತೆ ದಂಡ ವಿಧಿಸಿ ಪಂಚಾಯತ್ ನೋಟಿಸ್ ರವಾನೆಗೊಳಿಸಿದೆ.

Related posts

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!