September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆಯಷ್ಟೆ ರಾಶಿ ರಾಶಿ ಕಸ ರಸ್ತೆ ಬದಿ ಸುರಿದು ಹೋದ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಬಿಸಾಕಿದವರ ವಿಳಾಸ ಪತ್ತೆ ಹಚ್ಚಿ ಎರಡು ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ ಮರುದಿನವೇ ಮತ್ತೆ ಅದೇ ಜಾಗದಲ್ಲಿ ಕಸ ಹಾಗೂ ತಿಂದು ಉಳಿದ ಆಹಾರ ಪದಾರ್ಥಗಳನ್ನು ಬಿಸಾಡಿ ಹೋಗಿದ್ದು , ಪರಿಶೀಲಿಸಿದಾಗ ಸ್ಥಳೀಯ ಪ್ಲಾಟ್ ಒಂದರಲ್ಲಿ ವಾಸಿಸುತ್ತಿರುವ ಮನೆಯ ಮಾಹಿತಿ ಸಿಕ್ಕಿದ್ದು , ಈ ಬಗ್ಗೆ ಅವರಿಗೆ ಪಂಚಾಯತ್ ನ ಪಿಡಿಒ ತಾರಾನಾಥ್ ನಾಯ್ಕ, ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಪೋನ್ ಮಾಡಿದ ವೇಳೆ ಕಸ ಬಿಸಾಡಿರುವುದನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ.ಅದಲ್ಲದೇ ಪಂಚಾಯತ್ ವಿಧಿಸಿದ ರೂ.1 ಸಾವಿರ ದಂಡನೆ ಹಣವನ್ನು ಕಟ್ಟಿದ್ದಾರೆ. ಮುಂದೆ ಈ ರೀತಿ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಪಂಚಾಯತ್ ನೀಡಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya
error: Content is protected !!