22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ ಮತ್ತು ಬುಲ್-ಬುಲ್ ಘಟಕಗಳ 2025-26ನೇ ಸಾಲಿನ ವಾರ್ಷಿಕ ಶಿಬಿರಕ್ಕೆ ಎ.15ರಂದು ಚಾಲನೆ ನೀಡಲಾಯಿತು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿ ಮಾತನಾಡಿ ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಇಂತಹ ಶಿಬಿರಗಳಿಗೆ ಸದಾ ಪ್ರೋತ್ಸಾಹ ನೀಡಲಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಕೆ. ಎಂ ಶ್ರೀನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಉಪಸ್ಥಿತರಿದ್ದರು.

ಶಾಲಾ ಸಹಶಿಕ್ಷಕಿ ಗೈಡ್ ಕ್ಯಾಪ್ಟನ್ ಸುಮಲತಾ. ಎ ಸ್ವಾಗತಿಸಿ, ವಂದಿಸಿದರು. ಗೈಡ್ ವಿದ್ಯಾರ್ಥಿನಿ ಅಂಜನಾ. ಕೆ ಮತ್ತು ಸ್ಕೌಟ್ ವಿದ್ಯಾರ್ಥಿ ನಿಶಾನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya
error: Content is protected !!