25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ ಸಮಾರೋಪ ಸಮಾರಂಭ ಏ. 15 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್ ಎಂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾಲೇಜು ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಸಹಕರಿದ ಎಲ್ಲರನ್ನೂ ಸ್ಮರಿಸಿದರು. ಪ್ರೊ ಮ್ಯಾಕ್ಸಿಮ್ ಕಾರ್ಲ್, ಸೇಸಪ್ಪ ಗೌಡ, ಪ್ರವೀಣ್ ಕುಮಾರ್ ಕೆ, ಆಲ್ಬರ್ಟ್ ಮೊರಾಸ್, ಜೈನುದ್ದಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈಶ್ವರ್ ಗೌಡ ಅವರು ವಂದಿಸಿದರು. ಪ್ರವೀಣ್ ಕುಮಾರ್ ಕೆ ವರದಿ ವಾಚಿಸಿದರು. ಡಾ. ಪ್ರಕಾಶ್ ಡಿ’ಸೋಜಾ ಧನ್ಯವಾದವಿತ್ತರು. ಸ್ನಾತಕೋತ್ತರ ವಿಭಾಗದ ಪ್ರೊ. ನೆಲ್ಸನ್ ಮೋನೀಸ್ ಕಾರ್ಯಕ್ರಮ ನಿರ್ವಹಿಸಿದರು.

ಫಲಿತಾಂಶ :ಮಂಗಳೂರು ವಿಶ್ವವಿದ್ಯಾನಿಲಯ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಮೂಡುಬಿದ್ರೆ ಪ್ರಥಮ ಸ್ಥಾನ ಪಡೆಯಿತು.ಪುರುಷರ ರನ್ನರ್ಸ್ ಅಪ್ ತಂಡವಾಗಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಮತ್ತು ಮಹಿಳೆಯರ ರನ್ನರ್ಸ್ ಅಪ್ ತಂಡವಾಗಿ ಎಸ್ ಡಿ ಪಿ ಟಿ ಪ್ರಥಮ ದರ್ಜೆ ಕಾಲೇಜ್ ಕಟೀಲು ಮೂಡಿಬಂತು . ತೃತೀಯ ಸ್ಥಾನವನ್ನು ಪುರುಷರ ವಿಭಾಗದಲ್ಲಿ ಮಂಗಳೂರು ವಿ ವಿ ಕ್ಯಾಂಪಸ್ ಕೊಣಾಜೆ ಮತ್ತು ಮಹಿಳೆಯರ ವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಪಡೆಯಿತು. ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಪಡೆಯಿತು. ಒಟ್ಟು ಒಂಭತ್ತು ಪುರುಷರ ಮತ್ತು ಎಂಟು ಮಹಿಳೆಯರ ತಂಡಗಳಿದ್ದ ಪಂದ್ಯಾಟ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya
error: Content is protected !!