22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ ಸಮಾರೋಪ ಸಮಾರಂಭ ಏ. 15 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್ ಎಂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾಲೇಜು ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಸಹಕರಿದ ಎಲ್ಲರನ್ನೂ ಸ್ಮರಿಸಿದರು. ಪ್ರೊ ಮ್ಯಾಕ್ಸಿಮ್ ಕಾರ್ಲ್, ಸೇಸಪ್ಪ ಗೌಡ, ಪ್ರವೀಣ್ ಕುಮಾರ್ ಕೆ, ಆಲ್ಬರ್ಟ್ ಮೊರಾಸ್, ಜೈನುದ್ದಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈಶ್ವರ್ ಗೌಡ ಅವರು ವಂದಿಸಿದರು. ಪ್ರವೀಣ್ ಕುಮಾರ್ ಕೆ ವರದಿ ವಾಚಿಸಿದರು. ಡಾ. ಪ್ರಕಾಶ್ ಡಿ’ಸೋಜಾ ಧನ್ಯವಾದವಿತ್ತರು. ಸ್ನಾತಕೋತ್ತರ ವಿಭಾಗದ ಪ್ರೊ. ನೆಲ್ಸನ್ ಮೋನೀಸ್ ಕಾರ್ಯಕ್ರಮ ನಿರ್ವಹಿಸಿದರು.

ಫಲಿತಾಂಶ :ಮಂಗಳೂರು ವಿಶ್ವವಿದ್ಯಾನಿಲಯ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಮೂಡುಬಿದ್ರೆ ಪ್ರಥಮ ಸ್ಥಾನ ಪಡೆಯಿತು.ಪುರುಷರ ರನ್ನರ್ಸ್ ಅಪ್ ತಂಡವಾಗಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಮತ್ತು ಮಹಿಳೆಯರ ರನ್ನರ್ಸ್ ಅಪ್ ತಂಡವಾಗಿ ಎಸ್ ಡಿ ಪಿ ಟಿ ಪ್ರಥಮ ದರ್ಜೆ ಕಾಲೇಜ್ ಕಟೀಲು ಮೂಡಿಬಂತು . ತೃತೀಯ ಸ್ಥಾನವನ್ನು ಪುರುಷರ ವಿಭಾಗದಲ್ಲಿ ಮಂಗಳೂರು ವಿ ವಿ ಕ್ಯಾಂಪಸ್ ಕೊಣಾಜೆ ಮತ್ತು ಮಹಿಳೆಯರ ವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಪಡೆಯಿತು. ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಪಡೆಯಿತು. ಒಟ್ಟು ಒಂಭತ್ತು ಪುರುಷರ ಮತ್ತು ಎಂಟು ಮಹಿಳೆಯರ ತಂಡಗಳಿದ್ದ ಪಂದ್ಯಾಟ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!